BengaluruDistrictsPolitics

ಕಾಂಗ್ರೆಸ್‌ಗೆ 50-60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ; ಸಿಎಂ ಬೊಮ್ಮಾಯಿ

ಮಂಗಳೂರು; ಕಾಂಗ್ರೆಸ್‌ ಪಕ್ಷಕ್ಕೆ 50-60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ಅವರು ಬೇರೆ ಪಕ್ಷದಿಂದ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಸಮರ್ಥ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಅಂತಹದ್ದರಲ್ಲಿ ಅವರು ಹೇಗೆ ಅಧಿಕಾರಕ್ಕೆ ಬರುತ್ತಾರೆ ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ. ಎಲ್ಲಾ ಪಕ್ಷದಲ್ಲೂ ಇದು ನಡೆಯುತ್ತದೆ. ಆದ್ರೆ ಇದರಿಂದ ಪಕ್ಷಕ್ಕೇನೂ ತೊಂದರೆ ಆಗೋದಿಲ್ಲ. ಯಾಕಂದ್ರೆ ಪಕ್ಷ ಹಾಗೂ ಕಾರ್ಯಕರ್ತರು ಗಟ್ಟಿಯಾಗಿದ್ದಾರೆ. ಹೀಗಾಗಿ ಯಾರೇ ಪಕ್ಷ ಬಿಟ್ಟು ಹೋದರ ಬಿಜೆಪಿಗೆ ಯಾವುದೇ ನಷ್ಟವಾಗೋದಿಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ. ಹಲವಾರು ನಾಯಕರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ, ಕೆಲವರಿಗೆ ಟಿಕೆಟ್‌ ಸಿಕ್ಕಿಲ್ಲ. ಇದರಿಂದ ಸಮಾಧಾನಗೊಂಡಿದ್ದಾರೆ. ಅವರನ್ನು ಸಮಾಧಾನಪಡಿಸುವ ಕೆಲಸ ಮಾಡುತ್ತೇವೆ ಎಂದೂ ಸಿಎಂ ಹೇಳಿದರು.

Share Post