BengaluruPolitics

ಕಾಂಗ್ರೆಸ್‌ ಅವನತಿಯತ್ತ ಸಾಗುತ್ತಿದೆ; ಕೇಂದ್ರ ಗೃಹಸಚಿವ ಅಮಿತ್‌ ಶಾ

ಬೆಂಗಳೂರು; ನರೇಂದ್ರ ಮೋದಿ ಪಿಎಫ್‌ಐ ಬ್ಯಾನ್‌ ಮಾಡಿದರು. ಆದ್ರೆ ಸಿದ್ದರಾಮಯ್ಯ ಮಾತ್ರ ಪಿಎಫ್‌ಐ ವಿರುದ್ಧ ಕೇಸ್‌ ವಾಪಸ್‌ ಪಡೆದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಮ್ಮಘಟ್ಟದಲ್ಲಿ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್‌ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್‌ನ್ನು ಜನ ಯಾರೂ ನಂಬುತ್ತಿಲ್ಲ. ರೈತರ ಅಭಿವೃದ್ಧಿಗಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗಾಗಿ ನೂರಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಅಮಿತ್‌ ಶಾ ಹೇಳಿದರು. ಇದೇ ವೇಳೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹಾಗೂ ಮಾಜಿ ಸಿಎಂ ಯಡಿಯೂರಪ್ಪರನ್ನು ಹಾಡಿಹೊಗಳಿದರು.

 

Share Post