BengaluruPolitics

ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ; ಬಿಜೆಪಿಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು; ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ. ಯಾರು ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು ಅಂತಿದ್ದಾರೆ ಅವರು ಬರುತ್ತಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಲೋಪ ಮುಚ್ಚಿಕೊಳ್ಳಲು ಬಿಜೆಪಿ ಶಾಸಕರನ್ನು ಸೇರಿಸಿಕೊಳ್ತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಡಿ.ಕೆ.ಶಿವಕುಮಾರ್‌ ಈ ರೀತಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ. ತಮ್ಮ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು, ದೇಶ ಉಳಿಸಬೇಕು ಎಂದುಕೊಳ್ಳುವವವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರ ಅನುಕೂಲ ನೋಡಿಕೊಂಡು ತೀರ್ಮಾನ ಮಾಡ್ತಾರೆ. ನಾವು ನಿರ್ಬಂಧ ಮಾಡೋದಕ್ಕೆ ಆಗುತ್ತದಾ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದರು.  ಬೇರೆ ರಾಜ್ಯಗಳಲ್ಲಿ ಬಿಜೆಪಿ ರಾಜಕಾರಣ ಮಾಡಿದಾಗ ಏನಾಗಿತ್ತು? ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದಲ್ಲಿ BJP ಮಾಡಿದ್ದು ಸರಿನಾ? ಎಂದೂ ಡಿಕೆಶಿ ಇದೇ ವೇಳೆ ಪ್ರಶ್ನೆ ಮಾಡಿದರು.

Share Post