Bengaluru

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಳ್ಳಲು ಯತ್ನಿಸಿದ ರೈತ

ಬೆಂಗಳೂರು; ಕಾವೇರಿ ನೀರು ತಮಿಳುನಾಡಿಗೆ ಹರಿಸಬಾರದೆಂದು ಆಗ್ರಹಿಸಿ ಬೆಂಗಳೂರು ಬಂದ್‌ ಆಚರಿಸಲಾಗುತ್ತಿದೆ. ನಗರದಲ್ಲಿ 144 ಸೆಕ್ಷನ್‌ ಜಾರಿ ಮಾಡಿರುವುದರಿಂದ ಹೋರಾಟ ಮಾಡುವವರನ್ನು ಅಲ್ಲಲ್ಲೇ ಬಂಧಿಸಲಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ಮಾಡಲು ಅವಕಾಶ ನೀಡಲಾಗಿದೆ.
ಇನ್ನು ಹೀಗಿರುವಾಗಲೇ ರೈತರೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಟವಲ್‌ನಿಂದ ಮರಕ್ಕೆ ನೇಣು ಹಾಕಿಕೊಳ್ಳಲು ರೈತ ಯತ್ನ ಮಾಡಿದ್ದಾರೆ. ಇದನ್ನು ನೋಡಿದ ಸ್ಥಳದಲ್ಲಿದ್ದವರು ರೈತನನ್ನು ರಕ್ಷಣೆ ಮಾಡಿದ್ದಾರೆ.

 

Share Post