BengaluruPolitics

ಕಾಂಗ್ರೆಸ್‌ ಸೇರುವವರ ಪ್ರವಾಹ ಶುರುವಾಗಿದೆ; ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್‌

ಬೆಂಗಳೂರು; ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್‌ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಈಗ ಕಾಂಗ್ರೆಸ್‌ ಸೇರುವವರ ಪ್ರವಾಹ ಶುರುವಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಸೇರಲು ವಿವಿಧ ನಾಯಕರು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಿದರು.

ಈಗಾಗಲೇ ಬಿಜೆಪಿಯ ಅನೇಕ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಲಾಗುತ್ತದೆ ಎಂದು ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸಿದ್ದರಾಮೋತ್ಸವದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಶಕ್ತಿ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಹೀಗಾಗಿ ಹಲವು ಕಾಂಗ್ರೆಸ್‌ ಪಕ್ಷ ಸೇರಲು ಮುಂದಾಗಿದ್ದಾರೆ. ಆದ್ರೆ ಕಾಂಗ್ರೆಸ್‌ ಬಿಟ್ಟು ಹೋಗುವವರು ಯಾರೂ ಇಲ್ಲ ಎಂದು ಎಂ.ಬಿ.ಪಾಟೀಲ್‌ ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.

Share Post