BengaluruPolitics

ಗ್ಯಾರೆಂಟಿ ಸ್ಕೀಂ ಜಾರಿಯಾಗುತ್ತೆ, ಗಾಬರಿ ಬೇಡ; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ನಾವು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದೇವೆ. ಆದ್ರೂ ನಿತ್ಯವೂ ಇದರ ಬಗ್ಗೆ ಚರ್ಚೆಯಾಗುತ್ತಿದೆ. ಆದ್ರೆ ಈ ಬಗ್ಗೆ ಯಾರೂ ಗಾಬರಿಯಾಗಬೇಕಾದ ಅವಶ್ಯಕತೆ ಇಲ್ಲ. ಯಾರೂ ಕೂಡಾ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನಾವು ಏನು ಹೇಳಿದ್ದೇವೋ ಅದನ್ನು ಮಾಡಿ ತೋರಿಸುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದೆವು. ಅದನ್ನು ಕಾರ್ಯರೂಪಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಲ್ಲಾ ಗ್ಯಾರೆಂಟಿಗಳನ್ನೂ ಜಾರಿಗೆ ತಂದೇ ತರುತ್ತೇವೆ. ಕೆಲವರು ಈ ಬಗ್ಗೆ ಊಹಾಪೋಹಗಳನ್ನೆಬ್ಬಿಸುತ್ತಿದ್ದಾರೆ. ಅದಕ್ಕೆ ಯಾರೂ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post