BengaluruPolitics

ನಿಗಮ-ಮಂಡಳಿಗೆ ನೇಮಕ ವಿಚಾರ; 28ಕ್ಕೆ ಮತ್ತೆ ವೀಕ್ಷಕರು ಬರುತ್ತಾರೆ-ಡಿಕೆಶಿ

ಬೆಂಗಳೂರು; ನಿಗಮ-ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ವಿಚಾರವಾಗಿ ಸುರ್ಜೇವಾಲಾ ಅವರು ಚರ್ಚೆ ನಡೆಸಿದ್ದಾರೆ. ಅವರು ಮತ್ತೆ ನವೆಂಬರ್‌ 28ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಂದು ಪಟ್ಟಿ ಅಂತಿಮವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ನಿವಾಸ ಕಾವೇರಿ ಬಳಿ ಮಾತನಾಡಿದರು.

ನಮ್ಮಲ್ಲಿ ಯಾವ ಬಣ ಕೂಡಾ ಇಲ್ಲ. ನಾವೆಲ್ಲರೂ ಕಾಂಗ್ರೆಸ್ಸಿಗರೇ. ಗೃಹ ಸಚಿವ ಪರಮೇಶ್ವರ್‌ ಅವರಿಗೂ ಯಾವುದೇ ಅಸಮಾಧಾನ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದ್ದಾರೆ.

 

Share Post