BengaluruPolitics

ನನ್ನ ಸೋಲಿಗೆ ಮುಸ್ಲಿಂ ಸಮುದಾಯವೇ ಕಾರಣ; ಮಾಜಿ ಸಚಿವ ಎಂಟಿಬಿ ನಾಗರಾಜ್‌

ಹೊಸಕೋಟೆ; ಮುಸ್ಲಿಂ ಮುಖಂಡರು ನನಗೆ ಭಾಷೆ ಕೊಟ್ಟಿದ್ದರು. ನಿಮಗೇ ಮತ ಹಾಕುತ್ತೇನೆ ಎಂದು ಪ್ರಮಾಣ ಮಾಡಿದ್ದರು. ಆದ್ರೆ, ಮುಸ್ಲಿಂ ಸಮುದಾಯ ಮೋಸ ಮಾಡಿದ್ದರಿಂದಲೇ ನಾನು ಸೋತೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ. ಹೊಸಕೋಟೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ನಾಗರಾಜ್‌ ಸೋಲಿಗೆ ಕಾರಣರಾದವರ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ. 

ಬಿಜೆಪಿಯಿಂದ ಹಣ ಪಡೆದು ನೀವು ಕಾಂಗ್ರೆಸ್‌ ಗೆ ಮತ ಹಾಕಿದ್ದೀರಿ. ನಿಮ್ಮಿಂದಾಗಿಯೇ ನಾನು ಸೋತಿದ್ದೇನೆ. ಅಲ್ಲಾ ಮೇಲೆ ಪ್ರಮಾಣ ಮಾಡಿದ ನೀವು ನನ್ನ ಬೆನ್ನಿಗೆ ಚೂರಿ ಹಾಕಿದ್ದೀರಿ. ಹೀಗಾಗಿ ಇನ್ನ ಮೇಲೆ ನಿಮ್ಮನ್ನು ನಂಬುವುದಿಲ್ಲ ಎಂದು ಮುಸ್ಲಿಂ ಸಮುದಾಯಕ್ಕೆ ಎಂಟಿಬಿ ನಾಗರಾಜ್‌ ಚಾಟಿ ಬೀಸಿದ್ದಾರೆ. ಈ ಸಂಬಂಧ ಮಾತಣಾಡಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಇನ್ನು ಸೋಲಿಗೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಮಾಜಿ ಸಿಎಂ ಬೊಮ್ಮಾಯಿಯವರೂ ಕಾರಣ ಎಂದು ಎಂಟಿಬಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Share Post