BengaluruCinemaInternational

ವಿಶ್ವಸಂಸ್ಥೆ ಸಭೆಯಲ್ಲಿ ವಿಷಯ ಮಂಡಿಸುವ ಅವಕಾಶ; ಕನ್ನಡದಲ್ಲಿ ಮಾತಾಡ್ತಾರೆ ರಿಷಬ್‌ ಶೆಟ್ಟಿ

ಬೆಂಗಳೂರು; ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಕಾಂತಾರಾ ಖ್ಯಾತಿಯ ರಿಷಬ್‌ ಶೆಟ್ಟಿಗೆ ವಿಷಯ ಮಂಡನೆಗೆ ಅವಕಾಶ ಸಿಕ್ಕಿದೆ. ಈಗಾಗಲೇ ಕೆಲದಿನಗಳಿಂದ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಭಾಗವಹಿಸಿ ಪ್ರಚಲಿತ ವಿದ್ಯಮಾನಗಳು ಹಾಗೂ ಕಾಂತಾರಾ ಚಿತ್ರದ ಕುರಿತು ವಿಷಯ ಮಂಡಿಸಲು ಅವಕಾಶ ಸಿಕ್ಕಿದೆ. ಹೀಗಾಗಿ ರಿಷಬ್‌ ಅವರು ಕನ್ನಡದಲ್ಲೇ ವಿಷಯ ಮಂಡಿಸಿ, ವಿಶ್ವಸಂಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಮಾತನಾಡಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ವಿವಿಧ ದೇಶಗಳ ಪ್ರತಿನಿಧಿಗಳ ಸಭೆಯಲ್ಲಿ ರಿಷಬ್‌ಗೆ ಅವಕಾಶ ಸಿಕ್ಕಿದ್ದು, ರಾಜ್ಯದ ಭಾಷೆ, ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕಿನ ಕುರಿತು ಮಾತನಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Share Post