BengaluruLifestyle

100 ರಾಮಮಂದಿರಗಳ ಜೀರ್ಣೋದ್ಧಾರ ಮಾಡುತ್ತಂತೆ ರಾಜ್ಯ ಸರ್ಕಾರ!

ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ನಾಯಕರು ಹೋಗಿರಲಿಲ್ಲ. ಇದರಿಂದಾಗಿ ಕೆಲವರ ಆಕ್ರೋಶಕ್ಕೆ ಕಾಂಗ್ರೆಸ್‌ ಕಾರಣವಾಗಿತ್ತು. ಆದ್ರೆ ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದ 100 ಶ್ರೀರಾಮನ ದೇಗುಗಲಗಳ ಜೀರ್ಣೋದ್ಧಾರಕ್ಕೆ ಮುಂದಾಗಿದೆ. ಧಾರ್ಮಿಕ ದತ್ತು ಇಲಾಖೆ ವತಿಯಿಂದ ಶ್ರೀರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಸಿದ್ಧತೆ ನಡೆಸಿದ್ದು, ಬಜೆಟ್‌ನಲ್ಲಿ ಇದಕ್ಕೆ ಹಣಕಾಸು ಮೀಸಲಿಡಲಾಗುತ್ತದೆ.

ಕಾಂಗ್ರೆಸ್‌ ಗೆ ಧರ್ಮ ವಿರೋಧಿ ಎಂಬ ಹಣೆಪಟ್ಟಿ ಇದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಅಪವಾದದಿಂದ ದೂರವಾಗೋದು ಕಾಂಗ್ರೆಸ್‌ಗೆ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ರಾಮಮಂದಿರಗಳ ಜೀರ್ಣೋದ್ಧಾರಕ್ಕೆ ಹಣ ಮೀಸಲಿಡುವ ಸಾಧ್ಯತೆ ಇದೆ. ಹಣಕ್ಕಾಗಿ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸರ್ಕಾರ ಮುಂದೆ ಪ್ರಸ್ತಾವನೆ ಇಟ್ಟಿದ್ದಾರೆ.

 

Share Post