BengaluruPolitics

ಗೋಧ್ರಾ ದುರಂತ ಮರುಕಳಿಸುವ ಭೀತಿ ಇದೆ, ಸರ್ಕಾರ ರಕ್ಷಣೆ ಕೊಡಬೇಕು; ಬಿ.ಕೆ.ಹರಿಪ್ರಸಾದ್‌

ಬೆಂಗಳೂರು; ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪಣೆ ನಡೆಯುತ್ತಿದೆ. ಈ ಕಾರ್ಯಕ್ರಕ್ಕೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಗೋಧ್ರಾ ರೀತಿಯ ದುರಂತ ಮತ್ತೊಮ್ಮೆ ಏನಾದರೂ ಆಗಬಹುದು ಎಂಬ ಭೀತಿ ಇದೆ. ಹೀಗಾಗಿ ಕಾರ್ಯಕ್ರಮಕ್ಕೆ ಹೋಗೋರಿಗೆ ಸರ್ಕಾರವೇ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಹೇಳಿದರು.

ನನಗೆ ಮಾಹಿತಿ ಸಿಗ್ತಿದೆ. ಮಾಹಿತಿ ಇದ್ದೇ ಈ ಮಾತನ್ನು ಹೇಳುತ್ತಿದ್ದೇನೆ ಎಂದೂ ಹರಿಪ್ರಸಾದ್‌ ಹೇಳುತ್ತಿದ್ದಾರೆ. ಇನ್ನೊಂದೆಡೆ ರಾಮಮಂದಿರದ ಲೋಕಾರ್ಪಣೆಯನ್ನು ಧಾರ್ಮಿಕ ಗುರುಗಳಿಂದ ಉದ್ಘಾಟನೆ ಮಾಡಿಸಿದ್ದರೆ ನಾವೆಲ್ಲಾ ಒಪ್ಪಿಕೊಳ್ಳುತ್ತಿದ್ದೆವು. ಆದ್ರೆ ಮೋದಿ ಕೈಯಲ್ಲಿ ಮಂದಿರ ಉದ್ಘಾಟನೆ ಮಾಡಿಸುತ್ತಿರುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ.

 

Share Post