BengaluruPolitics

ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕೆಲ ಹಾಲಿ ಶಾಸಕರ ಕ್ಷೇತ್ರಗಳಲ್ಲೂ ಟಿಕೆಟ್‌ ಘೋಷಣೆಯಾಗಿಲ್ಲ. ಇದರಿಂದ ಯಾರೂ ಕೂಡಾ ಆತಂಕಪಡುವ ಅಗತ್ಯವಿಲ್ಲ. 95 ಪರ್ಸೆಂಟ್‌ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್‌ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಯಾದ ಮೇಲೆ ಮಾತನಾಡಿದ ಅವರು, ಕೆಲವೊಂದು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಇದೆ. ಟಿಕೆಟ್‌ಗಾಗಿ ಹಲವು ಪ್ರಬಲ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಸಂಧಾನ ಮಾತುಕತೆ ನಡೆಯುತ್ತಿದೆ. ಎಲ್ಲವೂ ಸರಿಹೋಗಲಿದೆ ಎಂದು ಹೇಳಿದ್ದಾರೆ.

ಮೋದಿ ಇಂದು ರಾಜ್ಯಕ್ಕೆ ಬಂದಿದ್ದಾರೆ. ಇಂದೇ ನೀವು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್‌, ರಾಜ್ಯ ಬಿಜೆಪಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ, ಮೋದಿಯವರನ್ನು ಕರೆತಂದು ಭಾಷಣ ಮಾಡಿಸಿದರೆ ಮತ ಬರಬಹುದು ಎಂದು ರಾಜ್ಯ ಬಿಜೆಪಿ ನಾಯಕರು ನಂಬಿದ್ದಾರೆ. ಆದ್ರೆ ಅದು ಸಾಧ್ಯವಿಲ್ಲ. ಈಗಾಗಲೇ ಜನ ತೀರ್ಮಾನ ಮಾಡಿದ್ದಾರೆ. ಫಸ್ಟ್‌ ಈ ಸರ್ಕಾರವನ್ನು ತೆಗೆಯಬೇಕು ಅಂತ. ಅದು ಆಗುತ್ತದೆ ಎಂದು ಹೇಳಿದರು.

Share Post