BengaluruPolitics

ಭಾರತ್‌ ಎಂದು ಹೊಸ ನಾಮಕರಣ ಅವಶ್ಯಕತೆ ಇಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ದೇಶಕ್ಕೆ ಭಾರತ್ ಎಂಬ ಹೊಸ ಹೆಸರು ನಾಮಕರಣ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೇಂದ್ರ ಬಿಜೆಪಿ ಸರ್ಕಾರ ಇಂಡಿಯಾ ಬದಲು ಭಾರತ ಎಂದು ನಾಮಕರಣ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಹೇಳಿದರು.

ರಿಪಬ್ಲಿಕ್‌ ಆಫ್‌ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಬರೆಯಲಾಗಿದೆ. ಇಂಡಿಯಾ ಎಂಬ ಪದವನ್ನು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಇಡೀ ದೇಶವೇ ಒಪ್ಪಿಕೊಂಡಿದೆ. ಹೀಗಾಗಿ ಭಾರತ್‌ ಎಂಬ ಹೆಸರು ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share Post