BengaluruPolitics

ಐಟಿ, ಇಡಿ ಎಂದು ಬಿಜೆಪಿ ನಾಯಕರನ್ನು ಹೆದರಿಸುತ್ತಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಪಕ್ಷಾಂತರ ಮಾಡಲು ತೀರ್ಮಾನಿಸಿರುವ ಬಿಜೆಪಿ ನಾಯಕರನ್ನು ಬಿಜೆಪಿ ಐಟಿ, ಇಡಿ ದಾಳಿ ಹೆಸರಿನಲ್ಲಿ ಬೆದರಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು.

ಎಲ್ಲರನ್ನೂ ಐಟಿ, ಇಡಿ ಎಂದು ಹೆದರಿಸಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಕೂಡಾ ಕೇಂದ್ರದ ನಾಯಕರು ಹೆದರಿಸುತ್ತಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಎಲ್ಲರನ್ನೂ ಕರೆದು ಮಾತನಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ.

Share Post