Bengaluru

ಕೆರೆಗಳನ್ನು ಮುಚ್ಚಿದ್ದರಿಂದಾಗಿ ಬೆಂಗಳೂರಿಗೆ ಈ ಸಮಸ್ಯೆ; ಆರ್‌.ಅಶೋಕ್‌

ಬೆಂಗಳೂರು; ಬೆಂಗಳೂರಿನಲ್ಲಿ ಸುಮಾರು 30 ಕೆರೆಗಳನ್ನು ಮುಚ್ಚಿಲಾಗಿದೆ. ಕೆರೆಗಳನ್ನು ಮುಚ್ಚಿದ ಕಾರಣದಿಂದಲೇ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ. ಮಳೆ ನೀರಿನಿಂದಾದ ಸಮಸ್ಯೆಗೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ಕೆರೆಗಳನ್ನು ಮುಚ್ಚಿದ ಕಾರಣಕ್ಕಾಗಿ ನಾವು ಇಂದು ಈ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು.

ಕೆರೆಗಳನ್ನು ಒತ್ತುವರಿ ಮಾಡಿರುವ ಮಾಹಿತಿ ಕೊಡುತ್ತೇನೆ. ಕೆರೆ ಒತ್ತುವರಿ ಮಾಡಿಕೊಂಡವರಿಗೆ ಶಿಕ್ಷೆ ಆಗಬೇಕಲ್ಲ ಎಂದು ಆರ್‌.ಅಶೋಕ್‌ ಪ್ರಶ್ನೆ ಮಾಡಿದರು. ಅಂದು ಒತ್ತುವರಿ ಮಾಡಿಕೊಳ್ಳುವಾಗ ಆಗಿನ ಸರ್ಕಾರಗಳು ಏನು ಮಾಡುತ್ತಿದ್ದವು..? ಅಂದು ಒತ್ತುವರಿ ತಡೆಯಬೇಕಿತ್ತು. ಅದು ಬಿಟ್ಟು ತಪ್ಪು ನಿರ್ಧಾರಗಳನ್ನು ಕೈಗೊಂಡಿದ್ದರಿಂದ ಈ ಸಮಸ್ಯೆ ಎದುರಾಗಿದೆ ಎಂದು ಅವರು ಹೇಳಿದರು.

Share Post