Bengaluru

ಸಿಎಂ ಕಾರ್ಯಕ್ರಮದಲ್ಲಿಯೇ ಕೋವಿಡ್‌ ರೂಲ್ಸ್‌ ಪಾಲನೆ ಇಲ್ಲ

ಬೆಂಗಳೂರು : ಕೋವಿಡ್‌ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿತ್ತು. ಈ ವೇಳೆ ಜನರನ್ನು ಪರಿಹಾರ ಪಡೆಯಲು ಬಸ್‌ನಲ್ಲಿ ಗುಂಪು ಗುಂಪಾಗಿ ಬಂದಿದ್ದಾರೆ. ಇದರಿಂದ ಕೋವಿಡ್‌ ನಿಯಮ ಉಲ್ಲಂಘನೆ ಆಗಿದೆ.

ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ ೧೧.೩೦ಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಸ್‌ನಲ್ಲಿ ಬಂದ ಜನರು ಯಾವುದೇ ಕೊರೊನಾ ನಿಯಮಾವಳಿಗಳನ್ನು ಪಾಲನೆ ಮಾಡಿಲ್ಲ. ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದ್ದಾರೆ.

 

Share Post