BengaluruHealth

ವಿಮ್ಸ್‌ನಲ್ಲಿ ಮೂವರ ಸಾವು ಪ್ರಕರಣ; ಇಲಾಖಾ ತನಿಖೆಗೆ ಆದೇಶ – ಡಾ.ಕೆ.ಸುಧಾಕರ್‌

ಬೆಂಗಳೂರು; ಬಳ್ಳಾರಿ ವಿಮ್ಸ್‌ನಲ್ಲಿ ಮೂವರು ರೋಗಿಗಳು ಸಾವನ್ನಪ್ಪಿರುವ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಲಾಪಕ್ಕೆ ಗೈರಾಗಿರುವ ಅವರು ಟ್ವೀಟ್‌ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಬಳ್ಳಾರಿ ವಿಮ್ಸ್‌ ನಲ್ಲಿ ನಡೆದ ಘಟನೆ ದುರದೃಷ್ಟಕರ. ಈ ಬಗ್ಗೆ ಇಲಾಖಾ ತನಿಖೆ ನಡೆಸಿ ವರದಿಗೆ ಸೂಚನೆ ನೀಡಿದ್ದೇನೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸುಧಾಕರ್‌ ಹೇಳಿದ್ದಾರೆ.

Share Post