BengaluruCinema

ಇಂದು ಅಪ್ಪು ಹುಟ್ಟುಹಬ್ಬ; ಟ್ವೀಟ್‌ ಮಾಡಿ ನಮನ ಸಲ್ಲಿಸಿದ ಸಿಎಂ

ಬೆಂಗಳೂರು; ಇಂದು ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅವರ ಸಮಾಧಿ ಬಳಿಗೆ ಸಾವಿರಾರು ಅಭಿಮಾನಿಗಳು ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ. ರಾಜ್ಯಾದ್ಯಂತ ಪುನೀತ್‌ ಜನ್ಮ ದಿನವನ್ನು ಸ್ಪೂರ್ತಿಯ ದಿನವನ್ನಾಗಿ ಆಚರಿಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೂಡಾ ಅಪ್ಪು ಸ್ಮರಣೆ ಮಾಡಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಅಪ್ಪು ಹುಟ್ಟುಹಬ್ಬಕ್ಕೆ ಟ್ವೀಟ್‌ ಮಾಡಿದ್ದಾರೆ.

ಸಿಎಂ ಟ್ವೀಟ್‌ ವಿವರ ಇಲ್ಲಿದೆ:

ʻಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರʼ

ಯಡಿಯೂರಪ್ಪ ಟ್ವೀಟ್‌;

ತಮ್ಮ ವ್ಯಕ್ತಿತ್ವ ಹಾಗೂ ಕಲಾಪ್ರೌಢಿಮೆಯಿಂದ ಅಸಂಖ್ಯಾತ ಅಭಿಮಾನಿಗಳನ್ನು ಪಡೆದ ಪ್ರತಿಭಾನ್ವಿತ ಕಲಾವಿದ, ಕನ್ನಡಿಗರ ಕಣ್ಮಣಿ, ವರನಟ ಡಾ.ರಾಜ್ ಕುಮಾರ್ ಪುತ್ರ, ಅಕಾಲಿಕವಾಗಿ ನಮ್ಮನ್ನಗಲಿದ ಕರ್ನಾಟಕ ರತ್ನ ಡಾII ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ನಮನಗಳು.

Share Post