Bengaluru

ಇವತ್ತು ಈ ಎಂಟು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಂತೆ!

ಬೆಂಗಳೂರು; ರಾಜ್ಯದ ಹಲವಾರು ಪ್ರದೇಶಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ.. ಆದ್ರೆ ಇವತ್ತು ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆಯಂತೆ.. ಇಂದಿನಿಂದ ಜೂನ್‌ 20ರವರೆಗೂ ಮಳೆ ಮುಂದುವರೆಯಲಿದ್ದು, ಆ ಭಾಗದ ಜನಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ..

ಕರಾವಳಿ ಕರ್ನಾಟಕದ ಕೆಲ ಭಾಗ ಹಾಗೂ ಉತ್ತರ ಒಳನಾಡಿನ ಕೆಲ ಭಾಗದಲ್ಲಿ ಭಾರೀ ಮಳೆಯಾಗಲಿದೆ.. ಇದರ ಜೊತೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ..

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.. ಇನ್ನು ಬೆಂಗಳೂರಿನಲ್ಲೂ ಜೂನ್‌ 20ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ..

 

Share Post