Bengaluru

ವಾಹನ ಟೋಯಿಂಗ್‌ ವ್ಯವಸ್ಥೆ ಮತ್ತೆ ಜಾರಿಗೊಳಿಸಲ್ಲ; ಆರಗ ಜ್ಞಾನೇಂದ್ರ

ಬೆಂಗಳೂರು; ಬೆಂಗಳೂರು ನಗರದಲ್ಲಿ ಮತ್ತೆ ವಾಃನ ಟೋಯಿಂಗ್‌ ವ್ಯವಸ್ಥೆ ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸದ್ಯ ಇರುವ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಬೊಮ್ಮಾಯಿಯವರು ಕೂಡಾ ಈ ಬಗ್ಗೆ ಚರ್ಚೆ ನಡೆಸಿದ್ದು ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Share Post