BengaluruPolitics

ತುಮಕೂರು ಗ್ರಾ. ಶಾಸಕ ಗೌರಿಶಂಕರ್‌ ಆಯ್ಕೆ ಅಸಿಂಧು; ಕೋರ್ಟ್‌

ಬೆಂಗಗಳೂರು; ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ ಅವರ ಆಯ್ಕೆ ಅಸಿಂಧು ಎಂದು ಕೋರ್ಟ್‌ ಘೋಷಣೆ ಮಾಡಿದೆ. ಕಲಬುರಗಿ ಹೈಕೋರ್ಟ್‌ ಪೀಠದಿಂದ ಈ ಆದೇಶ ಹೊರಡಿಸಲಾಗಿದ್ದು, ಇದರಿಂದಾಗಿ ಗೌರಿಶಂಕರ್‌ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸೋದಕ್ಕೆ ಆಗೋದಿಲ್ಲ.

ನ್ಯಾ.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಗೌರಿಶಂಕರ್‌ ಅವರಿಗೆ ಈ ಬಾರಿಯೂ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ನೀಡಲಾಗಿತ್ತು. ಆದ್ರೆ ಕೋರ್ಟ್‌ಗ ಆದೇಶದಿಂದಾಗಿ ಅವರು ಸ್ಪರ್ಧೆ ಮಾಡುವಂತಿಲ್ಲ. ಕಳೆದ ಚುನಾವಣೆಯಲ್ಲಿ ಗೌರಿ ಶಂಕರ್‌ ಅವರು ಚುನಾವಣಾ ಅಕ್ರಮ ನಡೆಸಿದ್ದರೆಂದು ದೂರು ನೀಡಲಾಗಿತ್ತು. ಇದರ ಆಧಾರದ ಮೇಲೆ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ನೀಡಿದೆ.

Share Post