BengaluruCinema

ದಾಂಪತ್ಯಕ್ಕೆ ಅಂತ್ಯ ಹಾಡಿದ ಕಿರುತೆರೆ ನಿರೂಪಕಿ ಚೈತ್ರ ವಾಸದೇವನ್‌

ಬೆಂಗಳೂರು; ಕಿರುತೆರೆ ನಿರೂಪಕಿ ಹಾಗೂ ಬಿಗ್‌ ಬಾಸ್‌ ಸ್ಪರ್ಧಿ ಚೈತ್ರ ವಾಸುದೇವನ್‌ ಅವರು ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ತಮ್ಮ ಪತಿ ಡಿವೋರ್ಸ್‌ ನೀಡಿರೋದಾಗಿ ಅವರೇ ಅಧಿಕೃತವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. 2017ರಲ್ಲಿ ಚೈತ್ರ ಅವರು ಉದ್ಯಮಿ ಸತ್ಯ ನಾಯ್ಡು ಎಂಬುವವರನ್ನು ಮದುವೆಯಾಗಿದ್ದರು. ಆದ್ರೆ ಇವರಿಬ್ಬರು ಬದುಕಿನಲ್ಲಿ ಬಿರುಕುಂಟಾಗಿದ್ದು, ಡಿವೋರ್ಸ್‌ ಪಡೆದಿದ್ದಾರೆ. ಈ ವಿಚಾರವನ್ನು ಚೈತ್ರ ಅಧಿಕೃತವಾಗಿ ಹೇಳಿಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ,

ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ.  ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ.

ಹೀಗಂತ ಚೈತ್ರ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

Share Post