BengaluruCrime

ಮತದಾರರ ಮಾಹಿತಿಗೆ ಕನ್ನ ವಿಚಾರ; ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

ಬೆಂಗಳೂರು; ಮತದಾರರ ಜಾಗೃತಿ ಅಭಿಯಾನವನ್ನು ದುರುಪಯೋಗ ಮಾಡಿಕೊಂಡು ಮತದಾರರ ಮಾಹಿತಿಗೆ ಕನ್ನ ಹಾಖಿದ ಪ್ರಕರಣ ಸಂಬಂಧ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದೆ. ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಬಿಬಿಎಂಪಿ ವಿಶೇಷ ಆಯುಕ್ತ ಎಸ್‌.ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಅವರನ್ನು ಅಮಾನತು ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಶ್ರೀನಿವಾಸ್‌ ಅವರು ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇಬ್ಬರನ್ನೂ ತಕ್ಷಣದಿಂದಲೇ ಅಮಾನತುಗೊಳಿಸಿ, ಇಲಾಖಾ ವಿಚಾರಣೆ ಮಾಡಬೇಕೆಂದು ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

Share Post