BengaluruCrime

ಬೆಂಗಳೂರಲ್ಲಿ ನಿಲ್ಲದ ಭ್ರೂಣ ಹತ್ಯೆ; 9 ಮಂದಿ ಅರೆಸ್ಟ್‌

ಬೆಂಗಳೂರು; ಭ್ರೂಣ ಹತ್ಯೆ ಕಾನೂನಿಗೆ ವಿರುದ್ಧ. ಹೀಗಿದ್ದರೂ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ವೈದ್ಯರು ಕೂಡಾ ಇದ್ದಾರೆ. 

ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ ಹಾಗೂ ಶಿವನಂಜೇಗೌಡ, ವೀರೇಶ್, ನವೀನ್,  ನಯನ್, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಸಿಕ್ಕಿಬಿದ್ದ ಆರೋಪಿಗಳು. ಮೊದಲಿಗೆ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಮೇರೆಗೆ ಇತರರನ್ನು ಅರೆಸ್ಟ್‌ ಮಾಡಲಾಗಿದೆ.

ಇವರು ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು. ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆಸಲಾಗುತ್ತಿತ್ತೆಂದು ಪೊಲೀಸರು ತಿಳಿಸಿದ್ದಾರೆ.

 

Share Post