BengaluruCinemaCrime

ಉಪೇಂದ್ರಗೆ ಬಂಧನ ಭೀತಿ; ನಾಪತ್ತೆಯಾದ ಸ್ಯಾಂಡಲ್‌ವುಡ್‌ ನಟ

ಬೆಂಗಳೂರು; ದಲಿತ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಟ ಹಾಗೂ ಉತ್ತಮ ಪ್ರಜಾಕೀಯ ಪಾರ್ಟಿ ಸಂಸ್ಥಾಪಕ ಉಪೇಂದ್ರ ನಾಪತ್ತೆಯಾಗಿದ್ದಾರೆ. ಅವರ ವಿರುದ್ಧ ಎರಡು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅಟ್ರಾಸಿಟಿ ಕಾಯ್ದೆಯಡಿ ಕೇಸ್‌ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿದ್ದಾರೆ.

ನಟ ಉಪೇಂದ್ರ ಅವರಿಗೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಿಂದ ನೋಟಿಸ್‌ ಜಾರಿ ಮಾಡಲಾಗಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಬರುವಂತೆ ಸೂಚನೆ ಕೊಡಲಾಗಿತ್ತು. ಆದ್ರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಇನ್ನು ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲೂ ಉಪೇಂದ್ರ ವಿರುದ್ಧ ಕೇಸ್‌ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಂಧನದ ಭೀತಿ ಇದೆ. ಹೀಗಾಗಿ ಅವರು, ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Share Post