BengaluruCinema

ಇಂದು ಪುನೀತ್‌ ಪರ್ವ ಕಾರ್ಯಕ್ರಮ; ಅರಮನೆ ಮೈದಾನದಲ್ಲಿ ಏನೆಲ್ಲಾ ವ್ಯವಸ್ಥೆ ಆಗಿದೆ..?

ಬೆಂಗಳೂರು; ಇಂದು ಸಂಜೆ ಅರಮನೆ ಮೈದಾನದಲ್ಲಿ ಪುನೀತ್‌ ಪರ್ವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು ಬರಲಿದ್ದಾರೆ. ತಡರಾತ್ರಿವರೆಗೂ ಕಾರ್ಯಕ್ರಮ ನಡೆಯುವುದರಿಂದ ಅಭಿಮಾನಿಗಳಿಗೆ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಕೇಸರಿಬಾತ್‌ ಹಾಗೂ ಉಪ್ಪಿಟ್ಟು ತಯಾರಿಸಲಾಗಿದೆ. ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ಪೊಲೀಸ್‌ ಸಿಬ್ಬಂದಿ ಹಾಗೂ ಕಾರ್ಯಕ್ರಮದ ಕೆಲಸ ಮಾಡುವ ಸಿಬ್ಬಂದಿಗೆ ಮೊಸರನ್ನ, ಬಿಸಿಬೇಳೇಬಾತ್‌ ಹಾಗೂ ಬೋಂಡಾ ತಯಾರಿಸಲಾಗುತ್ತಿದೆ.

ಈಗಾಗಲೇ ರಾಜ್ಯದ ನಾನಾ ಭಾಗಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ವಾಹನಗಳು ಮಾಡಿಕೊಂಡು ಬರುತ್ತಲೇ ಇದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಗಣ್ಯರು ಹಾಗೂ ಅಭಿಮಾನಿಗಳು ಕುಳಿತುಕೊಳ್ಳಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಪುನೀತ್ ಪರ್ವ ಕಾರ್ಯಕ್ರಮದಲ್ಲಿ ನಟಿ ರಮ್ಯಾ, ಪ್ರಭುದೇವ ಸೇರಿದಂತೆ ಅನೇಕರು ಪಾಲ್ಗೊಂಡು ನೃತ್ಯ ಮಾಡಲಿದ್ದಾರೆ. ಪು ನೀತ್  ನಟನೆಯ ಸಿನಿಮಾಗಳ ಗೀತೆಗಳಿಗೆ ಹಲವಾರು ನಟ ನಟಿಯರು ಕುಣಿಯಲಿದ್ದಾರೆ. 500 ಕ್ಕೂ ಹೆಚ್ಚು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

 

Share Post