BengaluruScience

ಚಂದ್ರಯಾನ ಯಶಸ್ಸು ಲಕ್ಷ್ಮೀ ಹಬ್ಬದ ಗಿಫ್ಟ್; ಯು.ಟಿ.ಖಾದರ್

ಬೆಂಗಳೂರು; ಇಸ್ರೋದ ಐತಿಹಾಸಿಕ ಚಂದ್ರಯಾನ-3 ಯೋಜನೆ ಯಶಸ್ವಿ ಹಿನ್ನೆಲೆ ಪೀಣ್ಯದಲ್ಲಿನ ಇಸ್ರೋದ ISTRAC ಕೇಂದ್ರಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದೇ‌ ವೇಳೆ ಮಾತನಾಡಿರುವ ಸ್ಪೀಕರ್ ಖಾದರ್ ಅವರು, ಚಂದ್ರಯಾನ-೩ ಯಶಸ್ವಿಯಾಗಿದ್ದು ವರಮಹಾಲಕ್ಷ್ಮಿ ಹಬ್ಬದ ಕೊಡುಗೆ ಎಂದು ಹೇಳಿದರು.

ಬಾಹ್ಯಾಕಾಶದಲ್ಲಿ ಇಸ್ರೋ ವಿಜ್ಞಾನಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಬೇರೆ ಯಾವ ದೇಶವೂ ಮಾಡದ ಸಾಧನೆ ಮಾಡಿದ್ದಾರೆ. ಮುಂದಿನ ಪೀಳಿಗೆ ಬಾಹ್ಯಾಕಾಶದಲ್ಲಿ ಇನ್ನಷ್ಟು ಸಂಶೋಧನೆ ಮಾಡಲು ಇದು ನೆರವಾಗುತ್ತದೆ ಎಂದು ಹೇಳಿದ್ದಾರೆ.

 

Share Post