BengaluruPolitics

ವಿ.ಸೋಮಣ್ಣ ನನ್ನ ಜೊತೆ ಮಾತನಾಡಿಲ್ಲ; ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು; ಸಚಿವ ಕೆ.ಸಿ.ನಾರಾಯಣಗೌಡರು ನಮ್ಮ ಜೊತೆ ಮಾತನಾಡಿಲ್ಲ. ಬೇರೆಯವರು ಕೂಡಾ ನಮ್ಮ ಜೊತೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಸಚಿವ ಕೆ.ಸಿ.ನಾರಾಯಣಗೌಡರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಇಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ವಿರುದ್ಧ ಕೆಆರ್‌ ಪೇಟೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಕೆಲವರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾವು ಸರಿ ಮಾಡಿಕೊಳ್ಳುತ್ತೇವೆ ಎಂದರು. ಇನ್ನು ಸೋಮಣ್ಣ ಅವರು ಡಿಕೆಶಿ ಚರ್ಚೆ ಮಾಡಿದ್ದಾರೆ ಎಂಬ ವಿಚಾರದ ಬಗ್ಗೆಯೂ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ವಿ.ಸೋಮಣ್ಣ ನನ್ನ ಜೊತೆ ಯಾವುದೇ ಚರ್ಚೆ ಮಾಡಿಲ್ಲ. ಹೌಸಿಂಗ್‌ ಬೋರ್ಡ್‌ ಕಾರ್ಯಕ್ರಮಕ್ಕೆ ಬನ್ನಿ ಎಂದು ಪತ್ರ ಬರೆದಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾರ್ಯಕ್ರಮವಿರುವುದರಿಂದ ನನಗೆ ಆಹ್ವಾನ ನೀಡಿದ್ದಾರೆ ಎಂದು ಹೇಳಿದರು.

Share Post