BengaluruPolitics

ವಿ.ಸೋಮಣ್ಣಗೆ ಬೆಂಗಳೂರು ದಕ್ಷಿಣ ಲೋಕಸಭಾ ಟಿಕೆಟ್‌ ಬೇಕಂತೆ..!

ಬೆಂಗಳೂರು; ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಸಚಿವ ವಿ.ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಗೋವಿಂದ ರಾಜನಗರ ಕ್ಷೇತ್ರದಿಂದ ಟಿಕೆಟ್‌ ನೀಡಿದ್ದಿದ್ದರೆ ಅವರು ಆರಾಮಾಗಿ ಗೆಲ್ಲುತ್ತಿದ್ದರು. ಆದ್ರೆ ಹೈಕಮಾಂಡ್‌ ಕೊಟ್ಟ ಟಾಸ್ಕ್‌ನ್ನು ಸೋಮಣ್ಣ ಅನಿವಾರ್ಯವಾಗಿ ಒಪ್ಪಿಕೊಂಡಿದ್ದರು. ಎರಡೂ ಕಡೆ ಸೋತಿರುವ ಅವರು ಇದೀಗ, ಹೈಕಮಾಂಡ್‌ ಮುಂದೆ ಲೋಕಸಭಾ ಟಿಕೆಟ್‌ಗೆ ಡಿಮ್ಯಾಂಡ್‌ ಇಟ್ಟಿದ್ದಾರೆ.

ವಿ.ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದ್ರೆ ಹೈಕಮಾಂಡ್‌ ಇನ್ನೂ ಹೊಸ ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಮಾಡಿಲ್ಲ. ಈ ಬೆನ್ನಲ್ಲೇ ಸೋಮಣ್ಣ ಅವರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಅನಂತ್‌ಕುಮಾರ್‌ ಅವರು ಪ್ರತಿನಿಧಿಸುತ್ತಿದ್ದರು. ಅವರ ನಿಧನದ ನಂತರ ಆ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್‌ ನೀಡಲಾಗಿತ್ತು. ತೇಜಸ್ವಿ ಸೂರ್ಯ ಅವರು ಹಾಲಿ ಸಂಸದರಾಗಿದ್ದಾರೆ. ಆದ್ರೆ ಅವರ ಬದಲಾಗಿ ನನಗೆ ಟಿಕೆಟ್‌ ಕೊಡಿ ಎಂದು ಸೋಮಣ್ಣ ಕೇಳುತ್ತಿದ್ದಾರೆ ಎನ್ನಲಾಗಿದೆ.

Share Post