Bengaluru

ಹೆಲಿಕಾಪ್ಟರ್‌ ದುರಂತ:ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

ಬೆಂಗಳೂರು: ತಮಿಳುನಾಡಿನ ಕೂನೂರು ಹೆಲಿಕಾಪ್ಟರ್‌ ದುರಂತದಲ್ಲಿ  ಗಂಭೀರ ಗಾಯಗೊಂಡಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನರಾಗಿದ್ದಾರೆ. ಬೆಂಗಳೂರಿನ ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಡಿಸೆಂಬರ್‌ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್‌ ದುರಂತ ನಡೆದಿತ್ತು. ಹೆಲಿಕಾಪ್ಟರ್‌ನಲ್ಲಿದ್ದ 13ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ರು, ಆದ್ರೆ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಮಾತ್ರ ಸಾವಿನ ದವಡೆಯಿಂದ ಪಾರಾಗಿ ಆಸ್ಪತ್ರೆ ಸೇರಿದ್ದರು, ತಮಿಳುನಾಡಿನ ವೆಲ್ಲಿಂಗ್ಟನ್‌ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಅಲ್ಲಿಂದ ಬೆಂಗಳೂರಿನ ಕಮಾಂಡು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ತರಲಾಯಿತು. ಸುಮಾರು 8ದಿನಗಳ ಕಾಲ ಜೀವನ್ಮರಟ ಹೋರಾಟ ನಡೆಸಿದ್ರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಇಂಡಿಯನ್‌ ಏರ್‌ಫೋರ್ಸ್‌ ಅಧಿಕೃತವಾಗಿ ಘೋಷಣೆ ಮಾಡಿದೆ.  ವರುಣ್‌ ಸಿಂಗ್‌ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು  ಫ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ವರುಣ್‌ ಸಿಂಗ್‌ ಅವರ ಕುಟುಂಬಕ್ಕೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ  ಎಂದು ಪ್ರಾರ್ಥಿಸಿದ್ದಾರೆ.

 

Share Post