Bengaluru

ಇನ್ನೂ 5 ಮಾರ್ಗದಲ್ಲಿ ವಾಯು ವಜ್ರ ಬಸ್‌ ಸೇವೆ

ಬೆಂಗಳೂರು : ಪ್ರಯಾಣಿಕರ ಅನುಕೂಲಕ್ಕೆ ಬಿಎಂಟಿಸಿ ಸದಾ ಶ್ರಮಿಸುತ್ತಲೇ ಇದೆ. ಈಗ ಜ.3ರಿಂದ ಹೆಚ್ಚುವರಿಯಾಗಿ 5 ಮಾರ್ಗಗಳಲ್ಲಿ ಹವಾ ನಿಯಂತ್ರಿತ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಲಿದೆ.

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌, ಕೆಂಪೇಗೌಡ ಬಸ್‌ ನಿಲ್ಧಾಣದಿಂದ ಜನಪ್ರಿಯ ಟೌನ್‌ಶಿಪ್‌ , ಕಾವೇರಿ ಭವನದಿಂದ ದೊಡ್ಡಬಳ್ಳಾಪುರ ಕ್ರಾಸ್‌, ಕೆಂಪೇಗೌಡ ಬಸ್‌ ನಿಲ್ದಾಣದಿಂದ ವೈಟ್‌ಫೀಲ್ಡ್‌ ಟಿಟಿಎಂಸಿ, ಹೆಬ್ಬಾಳದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ವರೆಗಿನ ಮಾರ್ಗಗಳಲ್ಲಿ ಈ ಸೇವೆ ಆರಂಭವಾಗಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಈಗಾಗಲೇ ವಜ್ರ ಸಂಚರಿಸುತ್ತಿರುವ ಮಾರ್ಗಗಳಲ್ಲಿ ಬಸ್‌ಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

Share Post