BengaluruPolitics

ಕೊನೆಗೂ ಬಿಜೆಪಿ ಪಟ್ಟಿ ಫೈನಲ್‌; ಲಕ್ಷ್ಮಣ ಸವದಿಗೆ ಸಿಕ್ತು ಚಾನ್ಸ್‌

ಬೆಂಗಳೂರು; ಕಾಂಗ್ರೆಸ್‌ ಪಕ್ಷ ಟಿಕೆಟ್‌ ಘೋಷಣೆ ಮಾಡಿದರೂ ಕೊನೆ ಕ್ಷಣದವರೂ ತಿಕ್ಕಾಟದಲ್ಲೇ ಇದ್ದ ಬಿಜೆಪಿ ಹೈಕಮಾಂಡ್‌ ಕೊನೆಗೂ ವಿಧಾನಪತಿಷತ್‌ಗೆ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಿದೆ. ಇದ್ರಲ್ಲಿ ಮಾಜಿ ಸಚಿವ ಲಕ್ಷ್ಮಣ ಸವದಿ ಟಿಕೆಟ್‌ ಸಿಕ್ಕಿದೆ. 

ಮಹಿಳಾ ಕೋಟಾ ಅಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್‌ ಟಿಕೆಟ್‌ ಸಿಕ್ಕಿದೆ. ಹಿಂದುಳಿದ ವರ್ಗ ಕೋಟಾದಲ್ಲಿ ಬಿಜೆಪಿ ನಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್‌, ದಲಿತರ ಕೋಟಾದಲ್ಲಿ ಬಿಜೆಪಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದೇ ವೇಳೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಮಾಜಿ ಸಭಾಪತಿ ಬಸವರಾಜ್‌ ಹೊರಟ್ಟಿಗೆ ಟಿಕೆಟ್‌ ನೀಡಲಾಗಿದೆ. ಇತ್ತೀಚೆಗೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ಹೈಕಮಾಂಡ್‌ ನೀಡಿದ ಭರವಸೆಯಂತೆ ಟಿಕೆಟ್‌ ದೊರಕಿದೆ.

 

 

Share Post