BengaluruPolitics

ನವೆಂಬರ್‌ 15ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು; ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಇದೇ ನವೆಂಬರ್‌ 15ರಂದು ಅವರು ಪದಗ್ರಹಣ ಮಾಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನವೆಂಬರ್‌ ಹದಿನೈದರಂದು ಬೆಳಗ್ಗೆ 10 ಗಂಟೆ ಪದಗ್ರಹಣ ಸಮಾರಂಭ ಫಿಕ್ಸ್‌ ಆಗಿದೆ. 

ಅನಂತರ ಅಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ಕೂಡಾ ಆಯೋಜನೆ ಮಾಡಲಾಗಿದೆ. ಅದರ ಮರುದಿನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವಿಚಾರದ ಬಗ್ಗೆ ಜೆಪಿ ನಡ್ಡಾ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ.

ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ಕಡೆ ಅಶ್ವತ್ಥ್‌ ನಾರಾಯಣ್‌ ಅವರು ನಾನು ವಿಪಕ್ಷ ನಾಯಕನಾಗಲು ಸಿದ್ಧ ಎಂದಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಜೆಡಿಎಸ್‌ನ ಕುಮಾರಸ್ವಾಮಿಯವರಿಗೆ ವಿಪಕ್ಷ ನಾಯಕನ ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಇದೆ.

 

Share Post