BengaluruPolitics

ವಿಜಯೇಂದ್ರಗೆ ಚುನಾವಣೆ ಎದುರಿಸುವ ಶಕ್ತಿ ಇದೆ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಚುನಾವಣೆ ಎದುರಿಸುವ ಶಕ್ತಿ ಇದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶಿಕಾರಿಪುರ ಕ್ಷೇತ್ರವನ್ನು ಯಡಿಯೂರಪ್ಪ ತಮ್ಮ ಪುತ್ರನಿಗೆ ಬಿಟ್ಟುಕೊಟ್ಟಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿ ಹೇಳಿದರು.

ಚುನಾವಣೆಗೆ ನಿಲ್ಲುವಂತೆ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಮೇಲೆ ಒತ್ತಡ ಹೇರುತ್ತಿದ್ದರು. ಕಾರ್ಯಕರ್ತರಿಗೆ ಸಮಸ್ಯೆ ಆಗಬಾರದು ಎಂದು ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದ್ದಾರೆ.

Share Post