BengaluruPolitics

ವಿಜಯೇಂದ್ರ ಶಿಕಾರಿಪುರದಲ್ಲೇ ನಿಲ್ತಾರೆ; ಬಿಎಸ್‌ವೈ ಸ್ಪಷ್ಟನೆ

ಮೈಸೂರು; ನಮ್ಮ ಪುತ್ರ ವಿಜಯೇಂದ್ರ ಅವರು ಶಿಕಾರಿಪುರದಲ್ಲೇ ನಿಲ್ಲುತ್ತಾರೆ. ನಾನು ಈ ಮೊದಲೇ ಹೇಳಿದ್ದೇನೆ. ಅದರಂತೆಯೇ ನಡೆಯುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿಗೆ ಹೋಗುವ ವೇಳೆ ಮಾತನಾಡಿದ ಅವರು, ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಇದೆ. ಆದ್ರೆ ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ನಿಲ್ಲಬೇಕು ಎಂಬುದು ನನ್ನ ಅಭಿಲಾಷೆ. ನಾನು ಮೊದಲೇ ಹೇಳಿದ್ದೆ. ಅದರಂತೆ ಅವರು ಅಲ್ಲೇ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

Share Post