BengaluruPolitics

ಡಿ.ಕೆ.ಶಿವಕುಮಾರ್‌ ಪರ ಒಕ್ಕಲಿಗ ಮುಖಂಡರು, ಸ್ವಾಮೀಜಿಗಳ ಸಭೆ

ಬೆಂಗಳೂರು; ಒಕ್ಕಲಿಗ ಮುಖಂಡರು ಬೆಂಗಳೂರಿನಲ್ಲಿ ಸಭೆ ಸೇರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಒಕ್ಕಲಿಗ ಸ್ವಾಮೀಜಿಗಳಾದ ನಂಜಾವಧೂತ ಸ್ವಾಮೀಜಿ ಹಾಗೂ ನಿರ್ಮಲಾನಂದ ಸ್ವಾಮೀಜಿ ಸಭೆಯಲ್ಲಿ ಪಾಲ್ಗೊಂಡು, ಡಿ.ಕೆ.ಶಿವಕುಮಾರ್‌ ಪರ ಮಾತನಾಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್‌ ಪಕ್ಷವನ್ನು ಸಮರ್ಥವಾಗಿ ಸಂಘಟನೆ ಮಾಡಿದ್ದಾರೆ. ಪಕ್ಷವನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ಒಮ್ಮೆ ಸಿಎಂ ಆಗಿ ಅಧಿಕಾರ ನಡೆಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿ ಹಾಗೂ ನಿರ್ಮಲಾನಂದ ಸ್ವಾಮೀಜಿ ಆಗ್ರಹ ಮಾಡಿದ್ದಾರೆ.

 

Share Post