BengaluruPolitics

ನಾವು ಚುನಾವಣೆಗೆ ಸನ್ನದ್ಧರಾಗಿದ್ದೇವೆ; ಸಿಎಂ ಬೊಮ್ಮಾಯಿ

ಬೆಂಗಳೂರು; ನಾವು ರಾಜ್ಯ ವಿಧಾನಸಭಾ ಚುನಾವಣೆಗೆ ಸನ್ನದ್ಧರಾಗಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದೇವೆ. ಹೀಗಾಗಿ ಸಕಾರಾತ್ಮಕ ಬಹುಮತ ಕೊಡಿ ಎಂದು ಜನರ ಮುಂದೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ಛಿದ್ರ ಆಗಿದೆ. ಹೀಗಾಗಿ ಅವರು ಹತಾಶೆಯಿಂದ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ಜನರು ನಂಬೋದಿಲ್ಲ. ಅವರ ಬೆತ್ತಲಾಗುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಾವು ಈಗಾಗಲೇ ರಾಜ್ಯದ ಮೂಲೆಮೂಲೆಯಲ್ಲಿ ಪ್ರಚಾರ ಮಾಡಿದ್ದೇವೆ. ಪಕ್ಷದ ಸಂಘಟನೆ ಮಾಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅತಿಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ. ಅನೇಕ ಸಂಘಟನಾ ಅಭಿಯಾನಗಳನ್ನು ಮಾಡಿದ್ದೇವೆ. ಬೂತ್‌ ಮಟ್ಟದ ಅಭಿಯಾನಗಳು, ರಥಯಾತ್ರೆ, ವಿಜಯ ಸಂಕಲ್ಪ ಯಾತ್ರೆಗಳನ್ನು ಮಾಡಿದ್ದೇವೆ. ನಮಗೆ ಈ ಬಾರಿ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share Post