BengaluruScience

ಎಎಪಿ ಪಕ್ಷದಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆ; ದಿನೇಶ್‌ ಗುಂಡೂರಾವ್‌ ಆರೋಪ

ಬೆಂಗಳೂರು; ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್‌ಗೆ ತೊಂದರೆಯಾಗುತ್ತಿದ್ದು, ಆಮ್‌ ಆದ್ಮಿ ಪಕ್ಷದವರು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡ್ತಿದಾರೆ ಅಂತ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಗುಜರಾತ್‌ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿ ಹೇಳಿದರು.

ಎಎಪಿ ಪಕ್ಷದಿಂದಾಗಿ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಿದೆ. ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮಗೆ ಈ ರೀತಿ ತೊಂದರೆಯಾಗಿದ್ದನ್ನು ನೋಡಿದ್ದೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಗುಜರಾತ್‌ನಲ್ಲಿ ನಮ್ಮ ನಿರೀಕ್ಷೆ ಬೇರೆಯೇ ಇತ್ತು. ಆದರೆ ಅದರಂತೆ ಫಲಿತಾಂಶ ಬಂದಿಲ್ಲ. ವಿರೋಧ ಪಕ್ಷಗಳಲ್ಲಿ ವೋಟ್ ವಿಭಜನೆಯಾಗ್ತಿರೋದೇ ಇದಕ್ಕೆ ಕಾರಣ ಎಂದು ಅವರು ಹೇಳಿದರು.

Share Post