Bengaluru

ಪುನೀತ್‌ ರಾಜ್‌ಕುಮಾರ್‌ಗೆ ಸಹಕಾರ ರತ್ನ ಪ್ರಶಸ್ತಿ; ಮಾರ್ಚ್‌ 20ರಂದು ಪ್ರದಾನ

ಬೆಂಗಳೂರು: ರಾಜ್ಯ ಸರ್ಕಾರದ ಸಹಕಾರ ಇಲಾಖೆಯಿಂದ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್‌ 20ರಂದು  ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್  ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಆರು ಮಂದಿಗೆ ಪ್ರಶಸ್ತಿ ನೀಡುತ್ತಿದ್ದೆವು. ಆದರೆ, ಕಳೆದ ವರ್ಷ ಜಿಲ್ಲೆಗೆ ಒಬ್ಬರು ಅಂತಾ ನಿರ್ಧರಿಸಿದ್ದೇವೆ. 40 ರಿಂದ 50 ಮಂದಿಗೆ ಪ್ರಶಸ್ತಿ ಕೊಡುತ್ತೇವೆ. 15 ಗ್ರಾಂ ಚಿನ್ನದ ಪದಕ, ಪ್ರಮಾಣಪತ್ರ ನೀಡಿ ಗೌರವಿಸುತ್ತೇವೆ. ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಮಾರ್ಚ್‌ 20 ರಂದು ಬೆಳಗ್ಗೆ 11 ಗಂಟೆಗೆ ಸಮಾರಂಭ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

Share Post