BengaluruPolitics

ನಾವು ನುಡಿದಂತೆ ನಡೆದಿದ್ದೇವೆ, ದೇಶಕ್ಕೆ ನಾವು ಮಾದರಿಯಾಗಿದ್ದೇವೆ; ಡಿ.ಕೆ.ಶಿವಕುಮಾರ್‌

ಮೈಸೂರು; ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದು ಕೇವಲ ನೂರು ದಿನಗಳಲ್ಲಿ ನಾಲ್ಕು ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ದೇಶಕ್ಕೆ ನಾವು ಮಾದರಿಯಾಗುತ್ತಿದ್ದೇವೆ. ಇಡೀ ದೇಶ ನಮ್ಮ ಯೋಜನೆಗಳನ್ನು ಗಮನಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಚುನಾವಣೆ ಸಮಯದಲ್ಲಿ ನಾವು ಐದು ಗ್ಯಾರೆಂಟಿಗಳನ್ನು ಜಾರಿ ಮಾಡೋದಾಗಿ ಹೇಳಿದ್ದೆವು. ಅದರಂತೆ ನಾವು ನಡೆದುಕೊಂಡಿದ್ದೇವೆ. ಈಗಾಗಲೇ ಮೂರು ಯೋಜನೆಗಳು ಜಾರಿಯಲ್ಲಿವೆ. ಇಂದು ನಾಲ್ಕನೇ ಯೋಜನೆ ಜಾರಿಯಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಸುಮಾರು 1 ಕೋಟಿ 11 ಲಕ್ಷ ಮಹಿಳೆಯರು ಅನುಕೂಲ ಪಡೆಯಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

 

Share Post