Bengaluru

ನಮ್ಮ ಸರ್ಕಾರ ಕೇವಲ ಅಭಿವೃದ್ಧಿಯತ್ತ ಮಾತ್ರ ಗಮನಹರಿಸುತ್ತದೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಹಲಾಲ್‌ ಮಾಂಸ ನಿಷೇಧ ಮಾಡಲು ಅಭಿಯಾನ ವಿಚಾರವಾಗಿ ಸಿಎಂ ಬೊಮ್ಮಾಯಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದಲ್ಲಿ ಇಂತಹ ಸನ್ನಿವೇಶ ಈಗಷ್ಟೇ ಆರಂಭವಾಗಿದೆ ಇದರ ಸಮಗ್ರತೆಯನ್ನು ಗಮನಿಸಬೇಕಾಗುತ್ತದೆ ಕೆಲವು ನಿಯಮಗಳು, ಆಚರಣೆಗಳು ಮೊದಲಿನಿಂದಲೂ ಇವೆ. ನಿಯಮಗಳು, ಆಚರಣೆಗಳಂತೆ ನಡೆದುಕೊಂಡು ಹೋಗ್ತಿದೆ.

ಧಾರ್ಮಿಕ ದತ್ತಿ ಕಾಯ್ದೆಯ ನಿಯಮದ ಬಗ್ಗೆ ಗಂಭೀರ ಆಕ್ಷೇಪಗಳ ಬಗ್ಗೆ ಅವಲೋಕನ ಮಾಡುತ್ತೇವೆ. ನಮ್‌ ಸರ್ಕಾರ ಕೇವಲ ಅಭಿವೃದ್ದಯತ್ತ ಮಾತ್ರ ಗಮನ ಕೊಡುತ್ತದೆ. ಬಲಪಂಥೀ, ಎಡಪಂಥೀಯ ಅನ್ನೋದು ಇಲ್ಲ. ನಾವು ಶಾಂತಿ, ಜನರ ಭದ್ರತೆ ಸಿದ್ಧಾಂತ ನಂಬುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಹೇಳಿದ್ದಾರೆ.

Share Post