BengaluruPolitics

ಲಾಠಿಯಲ್ಲಿ ಶಕ್ತಿ ಇದೆಯೋ, ನಮ್ಮ ರಟ್ಟೆಯಲ್ಲಿ ಶಕ್ತಿ ಇದೆಯೋ ನೋಡ್ತೇವೆ; ಬೊಮ್ಮಾಯಿ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿಯೂ ಬಿಜೆಪಿ ಪ್ರತಿಭಟನೆ ನಡೆಯಿತು. ಇಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬೊಮ್ಮಾಯಿ, ಆರ್‌.ಅಶೋಕ್‌ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ನಮ್ಮ ಸರ್ಕಾರದ ವೇಳೆ ಅನುಮತಿ ಪಡೆಯದಿದ್ದರೂ ಕಾಂಗ್ರೆಸ್‌ನ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದೆವು. ಆದ್ರೆ ಈಗ ನಮ್ಮ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪೊಲೀಸ್‌ ರಾಜ್ಯ ಎಷ್ಟು ದಿನ ನೋಡುತ್ತೇವೆ. ನಿಮ್ಮ ಲಾಠಿಯಲ್ಲಿ ಶಕ್ತಿ ಇದೆಯೋ, ನಮ್ಮ ರಟ್ಟೆಯಲ್ಲಿ ಶಕ್ತಿ ಇದೆಯೋ ತೋರಿಸುತ್ತೇವೆ ಎಂದು ಬೊಮ್ಮಾಯಿ ಗುಡುಗಿದರು. ವರ್ಗಾವಣೆಯಲ್ಲಿ ದೊಡ್ಡ ದಂಧೆ ಶುರುವಾಗಿದೆ. ಅದರ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

Share Post