BengaluruPolitics

ಸ್ವಂತ ಬಲದಿಂದ ಲೋಕಸಭಾ ಚುನಾವಣೆ ಎದುರಿಸುತ್ತೇವೆ; ದೇವೇಗೌಡ

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ನಾವು ನಮ್ಮ ಸ್ವಂತ ಬಲದ ಮೇಲೆ ಹೋರಾಟ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಮಗೆ ಸ್ವಂತ ಬಲದಲ್ಲಿ ಹೋರಾಟ ಮಾಡುವ ಶಕ್ತಿ ಇದೆ ಎಂದು ಹೇಳಿದರು.

ಮುಂದೆ ತಾಲ್ಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌, ಗ್ರಾಮ ಪಂಚಾಯತ್‌ ಚುನಾವಣೆಗಳಿವೆ. ನಾವು ಅವುಗಳ ತಯಾರಿಯಲ್ಲಿದ್ದೇವೆ. ಸದ್ಯಕ್ಕೆ ನಾವು ಲೋಕಸಭಾ ಚುನಾವಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ. ಈಗಲೇ ಆ ಬಗ್ಗೆ ಚರ್ಚೆ ಮಾಡೋದಿಲ್ಲ ಎಂದು ದೇವೇಗೌಡರು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಎಷ್ಟು ಕಡೆ ಸ್ಪರ್ಧೆ ಮಾಡಬೇಕು..? ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ತೇವೆ ಎಂದೂ ದೇವೇಗೌಡರು ಹೇಳಿದ್ದಾರೆ.

Share Post