BengaluruPolitics

ಕಾಂಗ್ರೆಸ್‌ ಪ್ರತಿಭಟನೆ ವಿರುದ್ಧ ಪ್ರಕರಣ ದಾಖಲಿಸುತ್ತೇವೆ; ಡಾ.ಕೆ.ಸುಧಾಕರ್‌

ಬೆಂಗಳೂರು; ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್‌ ಗಾಂಧಿಯವರನ್ನು ವಿಚಾರಣೆ ಮಾಡುತ್ತಿರುವುದನ್ನು ವಿರೋಧಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ಪ್ರತಿಭಟನೆ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರಸ್‌ ನಾಯಕರ ನಡೆ ನಾಚಿಕೆ ತರಿಸುವಂತಹದ್ದು. ಕಾಂಗ್ರೆಸ್‌ ನಾಯಕರು ಮಾಡುತ್ತಿರುವುದು ಸರಿಯಲ್ಲ.ಏನೆ ಇದ್ದರೂ ವಿಚಾರಣೆಯಾಗಲಿ, ಸತ್ಯ ಏನಿದೆಯೋ ಅದು ಹೊರಬರಲಿ ಎಂದರು. ಈ ಹಿಂದೆ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌, ಮಲ್ಲಿಕಾರ್ಜುನ ಖರ್ಗೆ, ಸೀತಾರಾಮ್‌ ಯೆಚೂರಿ ಸೇರಿದಂತೆ ಹಲವು ನಾಯಕರನ್ನು ವಿಚಾರಣೆಗೊಳಪಡಿಸಲಾಗಿತ್ತು. ಆದ್ರೆ ಆಗ ಯಾರೂ ಪ್ರತಿಭಟನೆ ಮಾಡಿರಲಿಲ್ಲ. ಈಗ ರಾಹುಲ್‌ ಗಾಂಧಿಯವರನ್ನು ವಿಚಾರಣೆ ಮಾಡುತ್ತಿರುವುದಕ್ಕೆ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸಚಿವ ಸುಧಾಕರ್‌, ಕಾಂಗ್ರೆಸ್‌ ನಾಯಕರು ಒಂದು ಕಡೆ ಸಂವಿಧಾನದ ಬಗ್ಗೆ ಭಾಷಣ ಮಾಡುತ್ತಾರೆ. ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

Share Post