BengaluruPolitics

ವರುಣಾಕ್ಕೆ ಯಡಿಯೂರಪ್ಪ ಅವರು ಬಂದರೂ ಸ್ವಾಗತ; ಸಿದ್ದರಾಮಯ್ಯ

ಬೆಂಗಳೂರು; ವರುಣಾ ಕ್ಷೇತ್ರದಲ್ಲಿ ಎದುರಾಳಿ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಯಾರೇ ಬಂದರೂ ಸ್ವಾಗತ. ಸ್ವತಃ ಯಡಿಯೂರಪ್ಪ ಅವರು ಬಂದು ನಿಂತರೂ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಲವರನ್ನು ಪಕ್ಷಕ್ಕೆ ಸೇರಿಸಿಕೊಂಡ ಮೇಲೆ ಅವರು ಮಾತನಾಡಿದರು. ಈ ವೇಳೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರಂತಲ್ಲ ಎಂಬ ಪ್ರಶ್ನೆ ಸಿದ್ದರಾಮಯ್ಯ ಉತ್ತರಿಸಿದರು.

ನನ್ನ ವಿರುದ್ಧ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಮುಖ್ಯ ಅಲ್ಲವೇ ಅಲ್ಲ. ಜನರ ಅಭಿಪ್ರಾಯ ಮುಖ್ಯವಾಗುತ್ತದೆ. ಯಾರೇ ನಮ್ಮ ವಿರುದ್ಧ ಸ್ಪರ್ಧೆ ಮಾಡಿದರೂ ಸ್ವಾಗತ ಮಾಡುತ್ತೇನೆ. ಯಡಿಯೂರಪ್ಪ ಅವರು ಬಂದರೂ ಸ್ವಾಗತ ಎಂದು ಸಿದ್ದರಾಮಯ್ಯ ಹೇಳಿದರು.

Share Post