BengaluruPolitics

ಕರ್ನಾಟಕದ ಸಿಎಂ ಯಾರು..?; ಸಂಜೆಯೊಳಗೆ ನಿರ್ಧಾರ..?

ಬೆಂಗಳೂರು; ದೆಹಲಿಯಿಂದ ಬಂದಿದ್ದ ಮೂವರು ಎಐಸಿಸಿ ವೀಕ್ಷಕರು ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಳಗಿನಜಾವದವರೆಗೂ ಈ ಪ್ರಕ್ರಿಯೆ ನಡೆದಿದೆ. ಈಗ ವೀಕ್ಷಕರು ದೆಹಲಿಗೆ ವಾಪಸ್ಸಾಗುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವೀಕ್ಷಕರು ದೆಹಲಿಗೆ ತೆರಳಲಿದ್ದು, ಹೈಕಮಾಂಡ್‌ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಂದ ಅಭಿಪ್ರಾಯವನ್ನು ತಿಳಿಸಲಿದ್ದಾರೆ.

ಇನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಕೂಡಾ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್‌ ಮುಂದೆಯೇ ಎಲ್ಲವೂ ತೀರ್ಮಾನವಾಗಲಿದೆ. ಅನಂತರ ಸಂಜೆ ವೇಳೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಘೋಷಣೆಯಾಗುತ್ತೆ ಎಂದು ಹೇಳಲಾಗುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಹೈಕಮಾಂಡ್‌ ತೀರ್ಮಾನದ ಬಗ್ಗೆ ಕುತೂಹಲ ಕೆರಳಿಸಿದೆ.

Share Post