BengaluruPolitics

ವರುಣಾದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ..?; ರಾಜ್ಯ ನಾಯಕರು ಕಳುಹಿಸಿದ ಮೂವರು ಯಾರು..?

ಬೆಂಗಳೂರು; ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವಂತೆ ಒತ್ತಡ ಹೇರಲಾಗುತ್ತಿದೆ. ಆದ್ರೆ, ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರು ವರುಣಾದಲ್ಲಿ ಸ್ಪರ್ಧೆ ಮಾಡೋದಿಲ್ಲ ಎಂದು ಹೇಳುತ್ತಿದ್ದಾರೆ. ಈ ನಡುವೆ ಸೋಮಣ್ಣ ಅವರಿಗೆ ವರುಣಾದಲ್ಲಿ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೆ ರಾಜ್ಯ ನಾಯಕರು ಕೇಂದ್ರಕ್ಕೆ ಕಳುಹಿಸಿರುವ ಪಟ್ಟಿಯಲ್ಲಿ ಈ ಇಬ್ಬರು ಹೆಸರುಗಳು ಇಲ್ಲವೇ ಇಲ್ಲ.

ಖಾಸಗಿ ರೆಸಾರ್ಟ್‌ನಲ್ಲಿ ಚರ್ಚೆ ಬಳಿಕ ರಾಜ್ಯ ಬಿಜೆಪಿ ನಾಯಕರು ವರುಣಾ ಕ್ಷೇತ್ರಕ್ಕೆ ಮೂವರ ಹೆಸರುಗಳನ್ನು ಕಳುಹಿಸಿದ್ದಾರೆ. ಅದ್ರಲ್ಲಿ ಸ್ಥಳೀಯ ಮುಖಂಡರಾದ ದೇವನೂರು ಪ್ರತಾಪ್‌, ಕಾಪು ಸಿದ್ದಲಿಂಗಸ್ವಾಮಿ ಹಾಗೂ ಸದಾನಂದ ಅವರ ಹೆಸರುಗಳನ್ನು ಸೂಚಿಸಲಾಗಿದೆ. ಆದ್ರೆ ಹೈಕಮಾಂಡ್‌ ಈ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡುತ್ತಾ ಅಥವಾ ಬೇರೆಯವರನ್ನು ಕಣಕ್ಕಿಳಿಸುತ್ತಾ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ.

Share Post