BengaluruPolitics

ಬುದ್ಧಿವಂತ ಪ್ರತಾಪಸಿಂಹ ಇಂತವರಿಗೆ ಯಾಕೆ ಪಾಸ್‌ ಕೊಟ್ಟರೋ..?; ಡಿ.ಕೆ.ಶಿವಕುಮಾರ್‌ ಪ್ರಶ್ನೆ

ಬೆಂಗಳೂರು; ಲೋಕಸಭೆಗೆ ಇಬ್ಬರು ಯುವಕರು ನುಗ್ಗಿದ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಬಹಳ ಬುದ್ಧವಂತರು. ಅವರು ಇಂತಹವರಿಗೆ ಯಾಕೆ ಪಾಸ್‌ ಕೊಟ್ಟರೋ ಎಂದು ಪ್ರಶ್ನೆ ಮಾಡಿದ್ದಾರೆ.
ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಕಲಾಪ ನಡೆಯುತ್ತಿದ್ದ ವೇಳೆ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ್ದರು. ಈ ಇಬ್ಬರು ಯುವಕರಿಗೆ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಪ್ರತಾಪ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

Share Post