BengaluruPolitics

ಕಾಂಗ್ರೆಸ್‌ ಸೇರ್ತಾರಾ ಹನೂರು ಜೆಡಿಎಸ್‌ ಶಾಸಕ..?; ಸಿಎಂ ಜೊತೆ ಗುಪ್ತ ಮಾತು..!

ಬೆಂಗಳೂರು; ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‌ನ ಅನೇಕ ನಾಯಕರು ಸಿಡಿದೇಳುತ್ತಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿಯವರು ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್‌ ಶಾಸಕರು ಹಾಗೂ ನಾಯಕರ ಸಭೆ ನಡೆಸಿ, ನಾವೆಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶ ರವಾನಿಸಿದ್ದರು. ಈ ನಡುವೆ ಜೆಡಿಎಸ್‌ ಶಾಸಕರೊಬ್ಬರು ಕಾಂಗ್ರೆಸ್‌ ಸೇರಲು ಆಸಕ್ತಿ ತೋರಿಸಿದ್ದಾರೆ ಎಂಬ ವಿಚಾರ ಹೆಚ್ಚು ಸುದ್ದಿಯಾಗುತ್ತಿದೆ.

ಹನೂರು ಕ್ಷೇತ್ರದ ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಚಿವ ಭೈರತಿ ಸುರೇಶ್‌ ಅವರು ಶಾಸಕ ಮಂಜುನಾಥ್‌ ಅವರನ್ನು ಕರೆದುಕೊಂಡು ಬಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿದ್ದಾರೆ.

ಇದಾದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸಿಎಂ ಸಿದ್ದರಾಮಯ್ಯ ಹಾಗೂ ಹನೂರು ಶಾಸಕ ಮಂಜುನಾಥ್‌ ಅವರು ಅರ್ಧ ಗಂಟೆಗೂ ಹೆಚ್ಚು ಕಾಲ ಇಬ್ಬರೇ ಮಾತನಾಡಿದ್ದಾರೆ. ಈ ವೇಳೆ ಅಲ್ಲಿಗೆ ಯಾರನ್ನೂ ಬಿಟ್ಟಿಲ್ಲ. ಮಂಜುನಾಥ್‌ ಅವರು ಕಾಂಗ್ರೆಸ್‌ ಸೇರಲು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿಯೇ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

 

Share Post