BengaluruPolitics

ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತಾ..?; ಹೆಚ್ಡಿಕೆ ಮುಂದಿನ ಸಿಎಂ ಅಂತ ಹರಿದ್ವಾರ ಸಂತರ ಭವಿಷ್ಯ

ಬೆಂಗಳೂರು; ಮುಂಬರುವ ಚುನಾವಣೆಗೆ ಮೂರೂ ಪಕ್ಷಗಳು ಭರ್ಜರಿ ಸಿದ್ಧರೆ ನಡೆಸಿವೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇತ್ತ ಕಾಂಗ್ರೆಸ್‌ ಈ ಬಾರಿ ನಾವೇ ಅಧಿಕಾರ ಹಿಡಿಯುತ್ತೇವೆ ಎಂಬ ವಿಶ್ವಾಸದಲ್ಲಿದೆ. ಇದರ ನಡುವೆ ಜೆಡಿಎಸ್‌ ಕೂಡಾ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದೆ. ಇದರ ಮಧ್ಯೆ, ಹರಿದ್ವಾರದ ಸಂತರೊಬ್ಬರು ಭವಿಷ್ಯ ನುಡಿದಿದ್ದಾರೆ. ಇದನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತದಾ ಎಂಬ ಅನುಮಾನ ಮೂಡಿದೆ.

ಯಾಕಂದ್ರೆ, ಹರಿದ್ವಾರದ ಸಂತರೊಬ್ಬರು ಕರ್ನಾಟಕ ವಿಧಾನಸಭಾ ಚುನಾವಣೆಯ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ದೇವೇಗೌಡ ಪುತ್ರ ಹೆಚ್‌.ಡಿ.ಕುಮಾರಸ್ವಾಮಿ ಸಿಎಂ ಆಗುತ್ತಾರಂತೆ. ಇದರ ವಿಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

 

 

Share Post